ಎಜ್ರ. 2. ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು. ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ: ಪರೋಷಿನ ಸಂತತಿಯವರು 2,172 ಶೆಫಟ್ಯನ ಸಂತತಿಯವರು 372 ಅರಹನ ಸಂತತಿಯವರು 775 ಯೇಷೂವ ಮತ್ತು ಯೋವಾಬನ ಕುಟುಂಬದ ಪಹತ್ ಮೋವಾಬಿನ ಸಂತತಿಯವರು 2,812 ಏಲಾಮಿನ ಸಂತತಿಯವರು 1,254 ಜತ್ತೂವಿನ ಸಂತತಿಯವರು 945 ಜಕ್ಕೈಯ ಸಂತತಿಯವರು 760 ಬಾನೀಯ ಸಂತತಿಯವರು 642 ಬೇಬೈಯ ಸಂತತಿಯವರು 623 ಅಜ್ಗಾದಿನ ಸಂತತಿಯವರು 1,222 ಅದೋನೀಕಾಮನ ಸಂತತಿಯವರು 666 ಬಿಗ್ವೈಯ ಸಂತತಿಯವರು 2,056 ಆದೀನನ ಸಂತತಿಯವರು 454 ಆಟೇರಿನವರಾದ ಹಿಜ್ಕೀಯನ ಸಂತತಿಯವರು 98 ಬೇಚೈಯ ಸಂತತಿಯವರು 323 ಯೋರನ ಸಂತತಿಯವರು 112 ಹಾಷುಮಿನ ಸಂತತಿಯವರು 223 ಗಿಬ್ಬಾರಿನ ಸಂತತಿಯವರು 95 ಬೆತ್ಲೆಹೇಮಿನ ಊರಿನವರು 123 ನೆಟೋಫ ಊರಿನವರು 56 ಅನಾತೋತ್ ಊರಿನವರು 128 ಅಜ್ಮಾವೆತ್ ಊರಿನವರು 42 ಕಿರ್ಯತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು 743 ರಾಮಾ ಮತ್ತು ಗೆಬ ಊರುಗಳವರು 621 ಮಿಕ್ಮಾಸಿನವರು 122 ಬೇತೇಲ್ ಮತ್ತು ಆಯಿ ಎಂಬ ಊರುಗಳವರು 223 ನೆಬೋ ಊರಿನವರು 52 ಮಗ್ಬೀಷ್ ಊರಿನವರು 156 ಏಲಾಮ್ ಎಂಬ ಮತ್ತೊಂದು ಊರಿನವರು 1,254 ಹಾರಿಮ್ ಊರಿನವರು 320 ಲೋದ್, ಹಾದೀದ್, ಓನೋ ಊರುಗಳವರು 725 ಜೆರಿಕೊ ಊರಿನವರು 345 ಸೆನಾಹ ಊರಿನವರು 3,630 ಯಾಜಕರು ಯಾರೆಂದರೆ: ಯೇಷೂವನ ಕುಟುಂಬಕ್ಕೆ ಸೇರಿದ ಯೆದಾಯನ ಸಂತತಿಯವರು 973 ಇಮ್ಮೇರನ ಸಂತತಿಯವರು 1,052 ಪಷ್ಹೂರನ ಸಂತತಿಯವರು 1,247 ಹಾರಿಮನ ಸಂತತಿಯವರು 1,017 ಲೇವಿ ಕುಲದವರು ಯಾರೆಂದರೆ: ಹೋದವ್ಯನ ಕುಟುಂಬಕ್ಕೆ ಸೇರಿದ ಯೇಷೂವ ಮತ್ತು ಕದ್ಮೀಯೇಲರ ಸಂತತಿಯವರು 74 ಗಾಯಕರು ಯಾರೆಂದರೆ: ಆಸಾಫನ ಸಂತತಿಯವರು 128 ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಟೇರ್, ಟಲ್ಮೋನ್, ಅಕ್ಕೂಬ್, ಹಟೀಟ್ ಮತ್ತು ಶೋಬೈ. ಇವರ ಸಂತತಿಯರು ಒಟ್ಟು 139 ದೇವಾಲಯದ ವಿಶೇಷ ಸೇವಕರು ಯಾರೆಂದರೆ: ಜೀಹ, ಹಸೂಫ, ಟಬ್ಬಾವೋತ್, ಕೇರೋಸ್, ಸೀಯಹಾ, ಪಾದೋನ್, ಲೆಬಾನ, ಹಗಾಬ, ಅಕ್ಕೂಬ್, ಹಾಗಾಬ್, ಶೆಮ್ಲೈ, ಹಾನಾನ್, ಗಿದ್ದೇಲ್, ಗಹರ್, ರೆವಾಯ, ರೆಚೀನ್, ನೆಕೋದ, ಗಜ್ಜಾಮ್, ಉಜ್ಜ, ಪಾಸೇಹ, ಬೇಸೈ, ಅಸ್ನ, ಮೆಗೂನೀಮ್, ನೆಫೀಸೀಮ್, ಬಕ್ಬೂಕ್, ಹಕ್ಕೂಫ, ಹರ್ಹೂರ್, ಬಚ್ಲೂತ್, ಮೆಹೀದ, ಹರ್ಷ, ಬರ್ಕೋಸ್, ಸೀಸೆರ, ತೆಮಹ, ನೆಚೀಹ, ಹಟೀಫ ಇವರ ಸಂತತಿಯವರು. ಸೊಲೊಮೋನನ ಸೇವಕರ ಸಂತತಿಯವರು: ಸೋಟೈ, ಹಸ್ಸೋಫೆರೆತ್, ಪೆರೂಧ, ಯಾಲ, ದರ್ಕೋನ್, ಗಿದ್ದೇಲ್, ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಆಮೀ ಇವರ ಸಂತತಿಯವರು. ದೇವಾಲಯದ ಎಲ್ಲಾ ಸೇವಕರೂ ಸೊಲೊಮೋನನ ಸೇವಕರೂ ಒಟ್ಟು ಸೇರಿ 392 ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಕೆಲವರು ಬಂದರು. ಇವರ ಕುಟುಂಬಗಳು ಇಸ್ರೇಲ್ ಕುಟುಂಬಕ್ಕೆ ಸೇರಿದವುಗಳಾಗಿವೆ ಎಂದು ರುಜುವಾತುಪಡಿಸಲು ಇವರಿಗೆ ಸಾಧ್ಯವಾಗಲಿಲ್ಲ. ಅವರು ಯಾರೆಂದರೆ: ದೆಲಾಯ, ಟೋಬೀಯ ಮತ್ತು ನೆಕೋದನ ಸಂತತಿಯವರು 652 ಯಾಜಕರಾದ ಹಬಯ್ಯ, ಹಕ್ಕೋಜ್, ಬರ್ಜಿಲ್ಲೈ ಇವರ ಸಂತತಿಯವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) ಇವರು ಹುಡುಕಿದರೂ ತಮ್ಮ ವಂಶಾವಳಿ ಪತ್ರವನ್ನು ಕಂಡುಕೊಳ್ಳಲಾಗಲಿಲ್ಲ. ಆದ್ದರಿಂದ ಇವರು ಅಶುದ್ಧರೆಂದು ಪರಿಗಣಿಸಲ್ಪಟ್ಟು ಯಾಜಕತ್ವದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು. ಹೀಗೆ ಒಟ್ಟು ನಲವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿ ತಮ್ಮ ಸ್ವದೇಶಕ್ಕೆ ಹಿಂದಿರುಗಿದರು. ಇವರಲ್ಲಿನ ಅವರ ಏಳು ಸಾವಿರದ ಮುನ್ನೂರ ಮೂವತ್ತೇಳು ಸೇವಕಸೇವಕಿಯರನ್ನು ಸೇರಿಸಲಿಲ್ಲ. ಇವರೊಂದಿಗೆ ಇನ್ನೂರು ಮಂದಿ ಗಾಯಕಗಾಯಕಿಯರೂ ಇದ್ದರು. ಅವರ ಬಳಿಯಲ್ಲಿ ಏಳುನೂರ ಮೂವತ್ತಾರು ಕುದುರೆಗಳು, ಇನ್ನೂರ ನಲವತ್ತೈದು ಹೇಸರಕತ್ತೆಗಳು, ನಾನೂರ ಮೂವತ್ತೈದು ಒಂಟೆಗಳು ಮತ್ತು ಆರು ಸಾವಿರದ ಏಳುನೂರ ಇಪ್ಪತ್ತು ಕತ್ತೆಗಳೂ ಇದ್ದವು. ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು. ದೇವಾಯಲ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು. ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.